Saturday, October 8, 2011

'ದಿನಕ್ಕೊಂದು ಪುಟ'

'ಇಸ್ಲಾಂ ಮರುಭೂಮಿಯ ಬುಡಕಟ್ಟಿಗೆ ಹೇಳಿಮಾಡಿಸಿದ ಧರ್ಮಾಚರಣೆ ;ಅದರ ಆಶಯಗಳು-ನಿಯಮಾವಳಿಗಳು ಅದನ್ನ ಹೆಚ್ಚು ಸ್ಪುಟಗೊಳಿಸುತ್ತವೆ' ಅನ್ನುವ ನನ್ನ ನಿರ್ಧಾರಕ್ಕೆ ಕಾರಣವಾದದ್ದು ಆಗುಂಬೆ ಎಸ್.ನಟರಾಜ್'ರವರು ಬರೆದ "ಮಹಮದ್ ಪೈಗಂಬರ್ ಹಾಗು ಖಲೀಫರು" ಎಂಬ ಇಸ್ಲಾಮಿನ ಆತ್ಮಕಥೆ.

ಬೆಂಗಳೂರಿನಲ್ಲಿ ಕಳೆದಬಾರಿ ನಡೆದ 'ಕನ್ನಡ ಸಾಹಿತ್ಯ ಸಮ್ಮೇಳನ'ದಲ್ಲಿ ಬೆಳಕು ಕಂಡಿದ್ದ ಈ ಹೊತ್ತಗೆಯನ್ನ (ಹಂಸ ಪ್ರಕಾಶನ) ಹಿಂದೆಂದೋ ಕುತೂಹಲಕ್ಕಾಗಿ ಓದಿದ್ದ ಖುರಾನ್ ಹಾಗು ಹದೀಸ್'ಗಳೊಂದಿಗೆ ಹೋಲಿಸಿ ಓದಿದಾಗ ಇದು ಇನ್ನಷ್ಟು ಧೃಡವಾಯಿತು.ಬಹುಷಃ ನಿಮ್ಮೆಲ್ಲರ ಭಾವನೆಗಳು ಇದಕ್ಕೆ ವ್ಯತರಿಕ್ತವಾಗಿದ್ದರಲೂಬಹುದು.ಮುಂದಿನ ಶುಕ್ರವಾರದಿಂದ ಅದೇ ಹೊತ್ತಗೆಯ ಪ್ರತಿಯೊಂದು ಪುಟವೂ ಇಲ್ಲಿ 'ದಿನಕ್ಕೊಂದು ಪುಟ'ದಂತೆ ಪ್ರಕಟಿಸುತ್ತೇನೆ.ಗೊತ್ತಿಲ್ಲದ ಅನೇಕ ಸಂಗತಿಗಳನ್ನ ಓದುವ ಸುಖವೂ ನಿಮ್ಮದಾಗಲಿ.

No comments:

Post a Comment